"ಮನೆ ಮದ್ದುಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೯ ನೇ ಸಾಲು: ೧೯ ನೇ ಸಾಲು:
 
'''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.<br>
 
'''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.<br>
 
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
 
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
==ಹಲಸಿನ ಹಣ್ಣು==
+
==ಹಲಸಿನ ಹಣ್ಣು (ಜ್ಯಾಕ್ ಫ್ರೂಟ್)==
'''ವಸ್ತು''' : ಹಲಸಿನ ಹಣ್ಣು
+
'''ವಸ್ತು''' : ಹಲಸಿನ ಹಣ್ಣು <br>
'''ಶಮನ''' : ತಲೆನೋವು, ನಿತ್ರಾಣ
+
'''ಶಮನ''' : ತಲೆನೋವು, ನಿತ್ರಾಣ <br>
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
+
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು. <br>
 +
ಶಮನ : ಪಿತ್ತ ವಿಕಾರ, ನರಗಳ ದೌರ್ಬಲ್ಯ.<br>
 +
ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು. ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.<br>
 +
==ಶುಂಠಿ==
 +
'''ವಸ್ತು''' : ಶುಂಠಿ<br>
 +
'''ಶಮನ''' : ಗಂಟಲು ಕಟ್ಟುವಿಕೆ, ಬಾಯಿ ವಾಸನೆ<br>
 +
ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ. ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.<br>
 +
'''ಶಮನ''' : ಅಜೀರ್ಣ, ನೆಗಡಿ, ಹಲ್ಲುನೋವು.<br>
 +
ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.
 +
==ಮೆಂತ್ಯಸೊಪ್ಪು==
 +
'''ವಸ್ತು''' : ಮೆಂತ್ಯಸೊಪ್ಪು <br>
 +
'''ಶಮನ''' : ಸಕ್ಕರೆ ಕಾಯಿಲೆ <br>
 +
ಸಕ್ಕರೆ ರೋಗ ನಿಯಂತ್ರಣದಲ್ಲಿ ಮೆಂತ್ಯಸೊಪ್ಪು ಸಹಕಾರಿ.
 +
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಣ್ತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.
 +
==ಎಳ್ಳು==
 +
'''ವಸ್ತು''' : ಎಳ್ಳು <br>
 +
'''ಶಮನ''' : ಸುಟ್ಟ ಗಾಯ, ಉರಿಮೂತ್ರ <br>
 +
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.
 +
==ಸಾಸಿವೆ(ಮಸ್ಟರ್ಡ್)==
 +
'''ವಸ್ತು'''  : ಸಾಸಿವೆ(ಮಸ್ಟರ್ಡ್)<br>
 +
ಶಮನ : ಹಲ್ಲು ನೋವು, ಉಪ್ಪಿನಕಾಯಿ ಶಿಲೀಂದ್ರ<br>
 +
ಹಲ್ಲು ನೋವಿರುವವರು ಸ್ವಲ್ಪ ಸಾಸಿವೆ ಕಾಳನ್ನು ಅಗಿದು ಸ್ವಲ್ಪ ಹೊತ್ತಿನ ನಂತರ ಉಗಿಯಬೇಕು. ಇದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಜತೆಗೆ ಹಸಿವನ್ನೂ ಹೆಚ್ಚಿಸುತ್ತದೆ. ಉಪ್ಪಿನಕಾಯಿಯಲ್ಲಿ ಸಾಸಿವೆಯನ್ನು ಸ್ವಲ್ಪ ಹೆಚ್ಚು ಬಳಸಿದರೆ, ಬೇಗ ಕೆಡುವುದಿಲ್ಲ. ಸಾಮಾನ್ಯವಾಗಿ ಉಪ್ಪಿನಕಾಯಿ ಹಾಳಾಗಲು ಆಸ್ಟರ್ಜಲಿನ್ ಎಂಬ ಶಿಲೀಂದ್ರ ಕಾರಣವಾಗಿದ್ದು, ಇದು ಬೆಳೆಯುವುದನ್ನು ಸಾಸಿವೆ ತಡೆಯುತ್ತದೆ.
 +
==ಗೋಧಿ==
 +
'''ವಸ್ತು''' : ಗೋಧಿ<br>
 +
'''ಶಮನ''' : ಹೊಟ್ಟೆ ಹುಣ್ಣು, ಕೀಲುನೋವು <br>
 +
ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು. ಜತೆಗೆ ಹಲ್ಲು ಮತ್ತು ವಸಡುಗಳಿಗೆ ಶಕ್ತಿ ಬರುವುದು. ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಕೀಲು ಮತ್ತು ಎಲುಬು ನೋವು ಶಮನಗೊಳ್ಳುವುದು.
 +
==ಜೇನುತುಪ್ಪ==
 +
'''ವಸ್ತು''' : ಜೇನುತುಪ್ಪ <br>
 +
'''ಶಮನ''' : ಸುಟ್ಟ ಗಾಯ, ಚರ್ಮರೋಗ. <br>
 +
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.
 +
==ಕಡಲೇ ಕಾಳು==
 +
'''ವಸ್ತು''' : ಕಡಲೇ ಕಾಳು <br>
 +
'''ಶಮನ''' : ನಿಶ್ಯಕ್ತಿ, ನೆಗಡಿ <br>
 +
ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು. ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ.
 +
==ಸೀತಾಫಲ (ಕಸ್ಟರ್ಡ್ ಆಪಲ್)==
 +
'''ವಸ್ತು''' : ಸೀತಾಫಲ (ಕಸ್ಟರ್ಡ್ ಆಪಲ್) <br>
 +
'''ಉಪಯೋಗ''' : ಜೀರ್ಣಶಕ್ತಿ ಹೆಚ್ಚಳ, ರಕ್ತವೃದ್ಧ <br>
 +
ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು. ಇದು ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ. ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ. ಕುರುಗಳನ್ನು ಪಕ್ವಗೊಳಿಸಲು ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.
 +
==ಹಾಗಲಕಾಯಿ (ಬಿಟ್ಟರ್ ಗೌರ್ಡ್)==
 +
'''ವಸ್ತು''' : ಹಾಗಲಕಾಯಿ(ಬಿಟ್ಟರ್ ಗೌರ್ಡ್) <br>
 +
'''ಶಮನ''' : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ. <br>
 +
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.
 +
==ಅಂಜೂರ (ಫಿಗ್)==
 +
'''ವಸ್ತು''' : ಅಂಜೂರ (ಫಿಗ್) <br>
 +
'''ಶಮನ''' : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.<br>
 +
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.
 +
==ಸೇಬು (ಆಪಲ್)==
 +
'''ವಸ್ತು''' : ಸೇಬು (ಆಪಲ್)<br>
 +
'''ಶಮನ''' : ತಲೆನೋವು, ಮರೆವು, ಮೊಡವೆ.<br>
 +
ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸಿದರೆ ತಲೆನೋವು ಕಡಿಮೆಯಾಗುವುದು. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ನಾಪಕ ಶಕ್ತಿ ಹೆಚ್ಚುವುದು.
 +
==ಪರಂಗಿ ಹಣ್ಣು==
 +
'''ವಸ್ತು''' : ಪರಂಗಿ ಹಣ್ಣು
 +
(ಪಪಾಯ)<br>
 +
'''ಶಮನ''' : ಹೃದಯ ದೌರ್ಬಲ್ಯ<br>
 +
ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.
 +
==ಕಡಲೇಕಾಯಿ==
 +
'''ವಸ್ತು''' : ಕಡಲೇಕಾಯಿ<br>
 +
'''ಉಪಯೋಗ''' : ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ.<br>
 +
ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.
 +
==ಮಾವು (ಮ್ಯಾಂಗೊ)==
 +
'''ವಸ್ತು''' : ಮಾವು (ಮ್ಯಾಂಗೊ)<br>
 +
'''ಶಮನ''' : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.<br>
 +
ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.

೧೦:೩೨, ೧೨ ಅಕ್ಟೋಬರ್ ೨೦೧೫ ನಂತೆ ಪರಿಷ್ಕರಣೆ

ಸೌತೆಕಾಯಿ

ವಸ್ತು : ಸೌತೆಕಾಯಿ
ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.
ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.

ಏಲಕ್ಕಿ

ವಸ್ತು : ಏಲಕ್ಕಿ
ಶಮನ : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

ಮೆಣಸು

ವಸ್ತು : ಮೆಣಸು
ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

ಈರುಳ್ಳಿ

ವಸ್ತು : ಈರುಳ್ಳಿ
ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.

ಕಡಲೆಕಾಳು

ವಸ್ತು : ಕಡಲೆಕಾಳು ಉಪಯೋಗ : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.

ಹಲಸಿನ ಹಣ್ಣು (ಜ್ಯಾಕ್ ಫ್ರೂಟ್)

ವಸ್ತು : ಹಲಸಿನ ಹಣ್ಣು
ಶಮನ : ತಲೆನೋವು, ನಿತ್ರಾಣ
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.
ಶಮನ : ಪಿತ್ತ ವಿಕಾರ, ನರಗಳ ದೌರ್ಬಲ್ಯ.
ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು. ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.

ಶುಂಠಿ

ವಸ್ತು : ಶುಂಠಿ
ಶಮನ : ಗಂಟಲು ಕಟ್ಟುವಿಕೆ, ಬಾಯಿ ವಾಸನೆ
ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ. ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.
ಶಮನ : ಅಜೀರ್ಣ, ನೆಗಡಿ, ಹಲ್ಲುನೋವು.
ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.

ಮೆಂತ್ಯಸೊಪ್ಪು

ವಸ್ತು : ಮೆಂತ್ಯಸೊಪ್ಪು
ಶಮನ : ಸಕ್ಕರೆ ಕಾಯಿಲೆ
ಸಕ್ಕರೆ ರೋಗ ನಿಯಂತ್ರಣದಲ್ಲಿ ಮೆಂತ್ಯಸೊಪ್ಪು ಸಹಕಾರಿ. ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಣ್ತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.

ಎಳ್ಳು

ವಸ್ತು : ಎಳ್ಳು
ಶಮನ : ಸುಟ್ಟ ಗಾಯ, ಉರಿಮೂತ್ರ
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.

ಸಾಸಿವೆ(ಮಸ್ಟರ್ಡ್)

ವಸ್ತು : ಸಾಸಿವೆ(ಮಸ್ಟರ್ಡ್)
ಶಮನ : ಹಲ್ಲು ನೋವು, ಉಪ್ಪಿನಕಾಯಿ ಶಿಲೀಂದ್ರ
ಹಲ್ಲು ನೋವಿರುವವರು ಸ್ವಲ್ಪ ಸಾಸಿವೆ ಕಾಳನ್ನು ಅಗಿದು ಸ್ವಲ್ಪ ಹೊತ್ತಿನ ನಂತರ ಉಗಿಯಬೇಕು. ಇದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಜತೆಗೆ ಹಸಿವನ್ನೂ ಹೆಚ್ಚಿಸುತ್ತದೆ. ಉಪ್ಪಿನಕಾಯಿಯಲ್ಲಿ ಸಾಸಿವೆಯನ್ನು ಸ್ವಲ್ಪ ಹೆಚ್ಚು ಬಳಸಿದರೆ, ಬೇಗ ಕೆಡುವುದಿಲ್ಲ. ಸಾಮಾನ್ಯವಾಗಿ ಉಪ್ಪಿನಕಾಯಿ ಹಾಳಾಗಲು ಆಸ್ಟರ್ಜಲಿನ್ ಎಂಬ ಶಿಲೀಂದ್ರ ಕಾರಣವಾಗಿದ್ದು, ಇದು ಬೆಳೆಯುವುದನ್ನು ಸಾಸಿವೆ ತಡೆಯುತ್ತದೆ.

ಗೋಧಿ

ವಸ್ತು : ಗೋಧಿ
ಶಮನ : ಹೊಟ್ಟೆ ಹುಣ್ಣು, ಕೀಲುನೋವು
ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು. ಜತೆಗೆ ಹಲ್ಲು ಮತ್ತು ವಸಡುಗಳಿಗೆ ಶಕ್ತಿ ಬರುವುದು. ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಕೀಲು ಮತ್ತು ಎಲುಬು ನೋವು ಶಮನಗೊಳ್ಳುವುದು.

ಜೇನುತುಪ್ಪ

ವಸ್ತು : ಜೇನುತುಪ್ಪ
ಶಮನ : ಸುಟ್ಟ ಗಾಯ, ಚರ್ಮರೋಗ.
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.

ಕಡಲೇ ಕಾಳು

ವಸ್ತು : ಕಡಲೇ ಕಾಳು
ಶಮನ : ನಿಶ್ಯಕ್ತಿ, ನೆಗಡಿ
ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು. ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ.

ಸೀತಾಫಲ (ಕಸ್ಟರ್ಡ್ ಆಪಲ್)

ವಸ್ತು : ಸೀತಾಫಲ (ಕಸ್ಟರ್ಡ್ ಆಪಲ್)
ಉಪಯೋಗ : ಜೀರ್ಣಶಕ್ತಿ ಹೆಚ್ಚಳ, ರಕ್ತವೃದ್ಧ
ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು. ಇದು ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ. ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ. ಕುರುಗಳನ್ನು ಪಕ್ವಗೊಳಿಸಲು ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.

ಹಾಗಲಕಾಯಿ (ಬಿಟ್ಟರ್ ಗೌರ್ಡ್)

ವಸ್ತು : ಹಾಗಲಕಾಯಿ(ಬಿಟ್ಟರ್ ಗೌರ್ಡ್)
ಶಮನ : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.

ಅಂಜೂರ (ಫಿಗ್)

ವಸ್ತು : ಅಂಜೂರ (ಫಿಗ್)
ಶಮನ : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.

ಸೇಬು (ಆಪಲ್)

ವಸ್ತು : ಸೇಬು (ಆಪಲ್)
ಶಮನ : ತಲೆನೋವು, ಮರೆವು, ಮೊಡವೆ.
ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸಿದರೆ ತಲೆನೋವು ಕಡಿಮೆಯಾಗುವುದು. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ನಾಪಕ ಶಕ್ತಿ ಹೆಚ್ಚುವುದು.

ಪರಂಗಿ ಹಣ್ಣು

ವಸ್ತು : ಪರಂಗಿ ಹಣ್ಣು (ಪಪಾಯ)
ಶಮನ : ಹೃದಯ ದೌರ್ಬಲ್ಯ
ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.

ಕಡಲೇಕಾಯಿ

ವಸ್ತು : ಕಡಲೇಕಾಯಿ
ಉಪಯೋಗ : ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ.
ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.

ಮಾವು (ಮ್ಯಾಂಗೊ)

ವಸ್ತು : ಮಾವು (ಮ್ಯಾಂಗೊ)
ಶಮನ : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.
ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.